ಸಿದ್ದಕಟ್ಟೆ ಸಹಕಾರಿ ವ್ಯವಸಾಯಿಕ ಸಂಘಕ್ಕೆ 2021-22 ನೇ ಸಾಲಿನಲ್ಲಿ 1.09 ಕೋಟಿ ಲಾಭ: ಪ್ರಭಾಕರ ಪ್ರಭು

ಯುವಧ್ವನಿ ನ್ಯೂಸ್

ಬಂಟ್ವಾಳ: ತಾಲೂಕಿನ ಸಿದ್ಧಕಟ್ಟೆ ಸಹಕಾರಿ ವ್ಯವಸಾಯಿಕ ಸಂಘವು 2021-22 ನೇ ಸಾಲಿನಲ್ಲಿ 293.14 ಕೋಟಿ ವ್ಯವಹಾರ ನಡೆಸಿದ್ದು, 1.09 ಕೋಟಿ ರೂ. ನಿವ್ವಳ ಲಾಭಗಳಿಸಿದೆ ಎಂದು ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ತಿಳಿಸಿದ್ದಾರೆ.

ಸಂಘದ ವಾರ್ಷಿಕ ಮಹಾಸಭೆಯ ಹಿನ್ನೆಲೆಯಲ್ಲಿ ಸಂಘದ ಪ್ರಗತಿಯ ಬಗ್ಗೆ ವಿವರಣೆ ನೀಡಿರುವ ಅವರು ಸಂಘದ ಠೇವಣಿಯನ್ನು 39.49 ಕೋ.ರೂ.ಗೆ ಹೆಚ್ಚಿಸಲಾಗಿದ್ದು, 62.86 ಕೋ.ರೂ. ಸಾಲ ಹೊರಬಾಕಿ ಇರುತ್ತದೆ, ಹೂಡಿಕೆ 6.27 ಕೋ.ರೂ.ನಿಂದ 9.49 ಕೋ.ರೂ.ಗೆ ಏರಿಕೆ ಕಂಡಿದ್ದು, ದುಡಿಯುವ ಬಂಡವಾಳ 48.68 ಕೋ.ರೂ.ನಿಂದ 77.92 ಕೋ.ರೂ.ಗೆ ಏರಿಕೆಯಾಗಿದೆ ಎಂದು ತಿಳಿಸಿದ್ದಾರೆ.

ಆಡಿಟ್ ವರ್ಗೀಕರಣದಲ್ಲಿಯು ‘ಎ’ ತರಗತಿ ಪಡೆದಿದ್ದು, 2021-22 ನೇ ಸಾಲಿನಲ್ಲಿ 275 ಮಂದಿ ಹೊಸ ಸದಸ್ಯರು ಸೇರ್ಪಡೆಯಾಗಿದ್ದು, 2.22 ಕೋ.ರೂ.ಪಾಲು ಬಂಡವಾಳ ಜಮೆಯಾಗಿದೆ.
ಸಂಘದ ಸದಸ್ಯರ ಅವಶ್ಯಕತೆಗನುಗುಣವಾಗಿ ಒಟ್ಟು 68.55 ಕೋ.ರೂ. ಸಾಲ ವಿತರಿಸಲಾಗಿದೆ. ಈ ಪೈಕಿ 1687 ರೈತ ಸದಸ್ಯರಿಗೆ 32.09 ಕೋ.ರೂ. ಬೆಳೆಸಾಲ, 1054 ರೈತ ಸದಸ್ಯರಿಗೆ 36.46 ಕೋ.ರೂ. ಕೃಷಿ ಅಭಿವೃದ್ದಿ ಸಾಲ ಸಹಿತ ಇನ್ನಿತರ ಸಾಲ ವಿತರಿಸಲಾಗಿದೆ ಪ್ರಭಾಕರ ಪ್ರಭು ವಿವರಿಸಿದ್ದಾರೆ.

ಪ್ರಸಕ್ತ ಸಾಲಿನಲ್ಲಿ ಕೇಂದ್ರ ಸರಕಾರದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ಅನ್ವಯ 1556 ಎಕ್ರೆ ಅಡಿಕೆ ಬೆಳೆಗೆ ಸಂಬಂಧಿಸಿದಂತೆ ಸುಮಾರು ರೂ 41 ಲಕ್ಷ ಹಣವನ್ನು ರೈತರಿಂದ ಪ್ರೀಮಿಯಂ ಪಾವತಿಸಲಾಗಿದೆ. ಸಂಘದಲ್ಲಿ ಪಡಿತರ ಸಾಮಾಗ್ರಿ, ರಾಸಾಯನಿಕ ಗೊಬ್ಬರ, ಕೀಟನಾಶಕ, ಮೈಲುತುತ್ತು, ಸುಣ್ಣ, ಸೇರಿದಂತೆ ಇನ್ನಿತರ ಗೃಹೋಪಯೋಗಿ ವಸ್ತುಗಳ ಮಾರಾಟ ಮಾಡಲಾಗುತ್ತಿದೆ. ಸಿದ್ಧಕಟ್ಟೆ ಪ್ರಧಾನ ಕಛೇರಿಯ ಬಳಿ ಎಮ್. ಎಸ್. ಸಿ. ಯೋಜನೆಯಡಿಯಲ್ಲಿ ರೂ. 1 ಕೋಟಿ ವೆಚ್ಚದಲ್ಲಿ ಗೋದಾಮು ಕಟ್ಟಡ ಕಾಮಗಾರಿ ಪ್ರಗತಿಯಲ್ಲಿದೆ ಎಂದು ಪ್ರಕಟಣೆಯಲ್ಲಿ ವಿವರಿಸಿದ್ದಾರೆ.

ಸಂಘದ ರಾಯಿ ಶಾಖಾ ಕಚೇರಿಯು ಸ್ವಂತ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿದೆ. ಸಂಘದ
ಆರಂಬೋಡಿ ಶಾಖೆ ಆರಂಬೊಡಿ ಗ್ರಾಮ ಪಂಚಾಯತ್ ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿದೆ.
ಎರಡು ಶಾಖಾ ಕಛೇರಿಗಳು ಉತ್ತಮ ವ್ಯವಹಾರ ನಡೆಸುತ್ತಿದೆ.

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್, ಉಳಿಪಾಡಿ ಇವರ ಶಿಫಾರಸ್ಸು ಮೇರೆಗೆ ಕೃಷಿ ಇಲಾಖೆಯಿಂದ ಪಡೆದಿರುವ ಎರಡು ಟ್ರಾಕ್ಟರ್ ಗಳನ್ನು ಹಡಿಲು ಬಿದ್ದ ಗದ್ದೆಗಳಿಗೆ ಮೊದಲ ಆದ್ಯತೆ ನೀಡಲಾಗುತ್ತಿದೆ. ಹಿರಿಯರ ಮಾರ್ಗದರ್ಶನ, ಸದಸ್ಯರ ಸಹಕಾರದಿಂದ ಸಂಘ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಸಂಘದಲ್ಲಿ ಸತೀಶ್ ಪೂಜಾರಿ ಅಲಕ್ಕೆ ಉಪಾಧ್ಯಕ್ಷರಾಗಿ, ಪದ್ಮರಾಜ್ ಬಲ್ಲಾಳ್ ಮಾವಂತೂರು, ಸಂದೇಶ್ ಶೆಟ್ಟಿ ಪೊಡುಂಬ, ರಾಜೇಶ್ ಶೆಟ್ಟಿ ಕೊನೆರಬೆಟ್ಟು, ಹರೀಶ್ ಆಚಾರ್ಯ ರಾಯಿ, ದಿನೇಶ್ ಪೂಜಾರಿ ಹುಲಿಮೇರು, ಉಮೇಶ್ ಗೌಡ, ಜಾರಪ್ಪ ನಾಯ್ಕ, ವೀರಪ್ಪ ಪರವ, ದೇವರಾಜ್ ಸಾಲ್ಯಾನ್, ಅರುಣಾ ಎಸ್. ಶೆಟ್ಟಿ, ಮಂದಾರತಿ ಎಸ್.ಶೆಟ್ಟಿ ನಿರ್ದೇಶಕರಾಗಿ ಹಾಗೂ ವೃತ್ತಿಪರ ನಿರ್ದೇಶಕರಾಗಿ ಮಾಧವ ಶೆಟ್ಟಿಗಾರ್, ಕೇಶವ ಕಿಣಿ ಸೇವೆ ಸಲ್ಲಿಸುತ್ತಿದ್ದಾರೆ. ಆರತಿ ಶೆಟ್ಟಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದು ಸಿಬ್ಬಂದಿ ವರ್ಗದವರು ಸೇವೆಯೂ ಗಮನಾರ್ಹವಾಗಿದೆ.

ಸೆಪ್ಟೆಂಬರ್ 24 ಕ್ಕೆ ಮಹಾಸಭೆ:

ಸಂಘದ 2021-22ನೇ ಸಾಲಿನ ವಾರ್ಷಿಕ ಮಹಾಸಭೆಯು ಸೆ.24 ರಂದು ಬೆಳಿಗ್ಗೆ 10.30 ಗಂಟೆಗೆ ಸಂಘದ ಪ್ರಧಾನ ಕಛೇರಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.
…………………………..
?️ಗೋಪಾಲ ಅಂಚನ್
ಸಂಪಾದಕರು
ಯುವಧ್ವನಿ ನ್ಯೂಸ್,ಕರ್ನಾಟಕ
ಮೊ:9449104318

…………………….