ಸಮೃದ್ಧಿ ಚಾರಿಟೇಬಲ್ ಟ್ರಸ್ಟ್ ಮತ್ತಿತರ ಸಂಘಟನೆಗಳ ಸಹಭಾಗಿತ್ವದಲ್ಲಿ ಫೆಬ್ರವರಿ 26ರಂದು ಸಿದ್ಧಕಟ್ಟೆ ಹರ್ಷಾಲಿ ಸಭಾಭವನದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

ಮಂಗಳೂರು: ಸಮೃದ್ಧಿ ಚಾರಿಟೇಬಲ್ ಟ್ರಸ್ಟ್ ಜೋಡುಮಾರ್ಗ- ಬಂಟ್ವಾಳ ಆಶ್ರಯದಲ್ಲಿ ಸಾರ್ವಜನಿಕ ಶ್ರೀ ಶಾರದೋತ್ಸವ ಆಚರಣಾ ಸಮಿತಿ ಸಿದ್ಧಕಟ್ಟೆ, ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ ಸಿದ್ಧಕಟ್ಟೆ ಹಾಗೂ ಜಸ್ಟೀಸ್ ಕೆ.ಎಸ್.ಹೆಗ್ಡೆ ಅಸ್ಪತ್ರೆ ದೇರಳಕಟ್ಟೆ ಮಂಗಳೂರು ಸಹಯೋಗದೊಂದಿಗೆ ಫೆಬ್ರವರಿ 26ರಂದು ಬೆಳಿಗ್ಗೆ 9ರಿಂದ ಸಿದ್ಧಕಟ್ಟೆ ಹರ್ಷಾಲಿ ಸಭಾಭವನದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಲಿದೆ. ಶಿಬಿರದಲ್ಲಿ ತಜ್ಞ ವೈಧ್ಯರ ತಂಡ ಭಾಗವಹಿಸಿ ಸಾಮಾನ್ಯ ಆರೋಗ್ಯ ತಪಾಸಣೆ, ಎಲುಬು ಮತ್ತು ಕೀಲು ತಪಾಸಣೆ, ಚರ್ಮ ಚಿಕಿತ್ಸಾ ವಿಭಾಗ, ಇಸಿಜಿ, ಕಿವಿ-ಮೂಗು-ಗಂಟಲು ವಿಭಾಗ, ಸ್ತ್ರೀ ವಿಭಾಗ, ಬಿ.ಪಿ.-ಶುಗರ್ ತಪಾಸಣೆ ಮತ್ತಿತರ ತಪಾಸಣೆಗಳನ್ನು ಉಚಿತವಾಗಿ ನಡೆಸಲಿದ್ದಾರೆ. ಅವಶ್ಯಕತೆವುಳ್ಳವರಿಗೆ ಔಷಧಿಗಳನ್ನು ಉಚಿತವಾಗಿ ನೀಡಲಾಗುತ್ತಿದೆ. ಸಾರ್ವಜನಿಕರು ಈ ಶಿಬಿರದ ಪ್ರಯೋಜನ ಪಡೆದುಕೊಳ್ಳುವಂತೆ ಸಮೃದ್ಧಿ ಚಾರಿಟೇಬಲ್ ಟ್ರಸ್ಟ್ ಪ್ರಕಟಣೆ ತಿಳಿಸಿದೆ. ವರದಿ:ಗೋಪಾಲ ಅಂಚನ್ ಸಂಪಾದಕರು: ಯುವಧ್ವನಿ ನ್ಯೂಸ್ ಕರ್ನಾಟಕ ಮೊ:9449104318