ಪಿಲಾತಬೆಟ್ಟು ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ನಿವೃತ್ತ ಕಾರ್ಯನಿರ್ವಹಣಾಧಿಕಾರಿ ಎ.ಮಂಜಪ್ಪ ಮೂಲ್ಯ ಮತ್ತು ನಿವೃತ್ತ ಶಾಖಾಧಿಕಾರಿ ನಳಿನಿ ಪ್ರಭು ಅವರಿಗೆ ಬೀಳ್ಕೊಡುಗೆ


ಬಂಟ್ವಾಳ: ಪಿಲಾತಬೆಟ್ಟು ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ನಿವೃತ್ತಿ ಹೊಂದಿದ ಎ. ಮಂಜಪ್ಪ ಮೂಲ್ಯ ಹಾಗೂ ನಿವೃತ್ತ ಶಾಖಾ ವ್ಯವಸ್ಥಾಪಕಿ ನಳಿನಿ ಪ್ರಭು ಅವರಿಗೆ ಬೀಳ್ಕೊಡುಗೆ ಸಮಾರಂಭ ಸಂಘದ ಸುವಿಧಾ ಸಭಾ ಭವನದಲ್ಲಿ ನಡೆಯಿತು.


ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಟಿ.ಜಿ.ರಾಜಾರಾಮ ಭಟ್ ನಿವೃತ್ತರನ್ನು ಸಮ್ಮಾನಿಸಿ ಮಾತನಾಡಿ, ಮಂಜಪ್ಪ ಮೂಲ್ಯ ಅವರು ತಮ್ಮ ಸೇವಾವಧಿಯಲ್ಲಿ ಆದರ್ಶ ಮುಖ್ಯ ಕಾರ್ಯಾವಿರ್ವಹಣಾಧಿಕಾರಿಯಾಗಿ ಸಹಕಾರಿ ಕ್ಷೇತ್ರದಲ್ಲಿ ಮೆಚ್ಚುಗೆಗೆ ಪಾತ್ರರಾದವರು. ಸೇವೆಯೇ ಅತ್ಯಂತ ಪರಮ ಧರ್ಮವೆಂದು ನಂಬಿ ಬದುಕಿದ ಇವರು ಸಹಕಾರಿ ಧರ್ಮವನ್ನು ಪ್ರಾಮಾಣಿಕವಾಗಿ ಪರಿಪಾಲಣೆ ಮಾಡಿ ಜಿಲ್ಲೆಗೆ ಮಾದರಿಯಾಗಿದ್ದಾರೆ ಎಂದು ಹೇಳಿದರು.


ಜಿ.ಪಂ.ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ತಮ್ಮ ಸೇವಾವಧಿಯಲ್ಲಿ ಕರ್ತವ್ಯ ದಕ್ಷತೆ, ಬದ್ಧತೆ ಮತ್ತು ಪ್ರಾಮಾಣಿಕತೆಗೆ ಹೆಸರಾದವರು ಮಂಜಪ್ಪ ಮೂಲ್ಯ ಎಂದರು.
ಸಂಘದ ಅಧ್ಯಕ್ಷ ಕೆ.ಲಕ್ಷ್ಮೀ ನಾರಾಯಣ ಉಡುಪ ಅಧ್ಯಕ್ಷತೆ ವಹಿಸಿ ಮಾತನಾಡಿ, ಸರಳ ಸಜ್ಜನಿಕೆಯ ಸ್ನೇಹಜೀವಿಯಾಗಿರುವ ಮಂಜಪ್ಪ ಮೂಲ್ಯ ಅವರು ಸಾಮಾಜಿಕ, ಸಾಂಸ್ಕೃತಿಕ, ಧಾರ್ಮಿಕ ಕ್ಷೇತ್ರದಲ್ಲೂ ಗಮನಾರ್ಹ ಸೇವೆ ಸಲ್ಲಿಸಿದವರು. ನಳಿನಿಪ್ರಭು ಅವರ ಸೇವೆಯೂ ಗಮನಾರ್ಹವಾದುದು. ಇಬ್ಬರ ಸೇವೆಯನ್ನು ಗುರುತಿಸಿ ಗೌರವಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಹೇಳಿದರು.


ಪ್ರಗತಿಪರ ಕೃಷಿಕ ಉದಯ ಕುಮಾರ್ ಕಟ್ಟೆಮನೆ, ಬಳ್ಳಮಂಜ ಶ್ರೀ ಅನಂತೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಡಾ.ಹರ್ಷ ಸಂಪಿಗೆತ್ತಾಯ, ಎಸ್‌ಸಿಡಿಸಿಸಿ ಬ್ಯಾಂಕ್ ಮಡಂತ್ಯಾರು ಶಾಖಾ ವ್ಯವಸ್ಥಾಪಕಿ ಸೌಮ್ಯಾ, ಪಿಲಾತಬೆಟ್ಟು ಗ್ರಾ.ಪಂ.ಅಧ್ಯಕ್ಷೆ ಹರ್ಷಿಣಿ ಪುಷ್ಪಾನಂದ, ಇರ್ವತ್ತೂರು ಗ್ರಾ.ಪಂ.ಅಧ್ಯಕ್ಷ ಎಂ.ಪಿ.ಶೇಖರ್, ತಾ.ಪಂ.ಮಾಜಿ ಸದಸ್ಯ ರಮೇಶ್ ಪೂಜಾರಿ ಕುಡ್ಮೇರು ಅತಿಥಿಗಳಾಗಿ ಭಾಗವಹಿಸಿ ಶುಭ ಹಾರೈಸಿದರು. ಸಂಘದ ಉಪಾಧ್ಯಕ್ಷ ಉಮೇಶ ಪೂಜಾರಿ ತಿಮರಡ್ಡ, ನಿರ್ದೇಶಕರಾದ ಸುಂದರ ನಾಯ್ಕ, ಬೂಬ ಸಪಲ್ಯ, ನಾರಾಯಣ ಪೂಜಾರಿ, ಸಂತೋಷ ಕುಮಾರ್ ಶೆಟ್ಟಿ, ದಿನೇಶ್ ಮೂಲ್ಯ, ಸೀತಾರಾಮ ಶೆಟ್ಟಿ, ಚಂದ್ರಶೇಖರ ಹೆಗ್ಡೆ, ಶಿವಯ್ಯ ಉಪಸ್ಥಿತರಿದ್ದರು.
ಸಂಘದಲ್ಲಿ ಪ್ರಭಾರ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸಿದ ಕೇಂದ್ರ ಸಹಕಾರಿ ಬ್ಯಾಂಕ್ ಬಂಟ್ವಾಳ ವಲಯ ಮೇಲ್ವಿಚಾರಕ ಕೇಶವ ಕಿಣಿ ಅವರನ್ನು ಸಮ್ಮಾನಿಸಲಾಯಿತು.
ಪ್ರಭಾರ ಮುಖ್ಯ ಕಾರ್ಯನಿರ್ವಹಣಾಽಕಾರಿ ಬಬಿತಾ ಡಿ. ಸ್ವಾಗತಿಸಿದರು. ನಿರ್ದೇಶಕ ಪ್ರಭಾಕರ ಪಿ.ಎಂ. ಅಭಿನಂದನಾ ಮಾತುಗಳನ್ನಾಡಿದರು. ದೀಕ್ಷಿತ್ ಚೌಟ ಸಮ್ಮಾನ ಪತ್ರ ವಾಚಿಸಿದರು. ಜಯರಾಮ ನಾಯ್ಕ ವಂದಿಸಿದರು. ಪತ್ರಕರ್ತ ಗೋಪಾಲ ಅಂಚನ್ ಕಾರ್ಯಕ್ರಮ ನಿರೂಪಿಸಿದರು.

ವರದಿ:ಗೋಪಾಲ ಅಂಚನ್ ಸಂಪಾದಕರು: ಯುವಧ್ವನಿ ನ್ಯೂಸ್ ಕರ್ನಾಟಕ. ಮೊ:9449104318