ಬಂಟ್ವಾಳ ಪುರಸಭೆಯನ್ನು ನಗರಸಭೆಯಾಗಿ ಮೇಲ್ದರ್ಜೆಗೇರಿಸುತ್ತೇನೆ-ಪ್ರಜಾಧ್ವನಿ ಯಾತ್ರೆಯಲ್ಲಿ ರಮಾನಾಥ ರೈ ಘೋಷಣೆ

ಬಂಟ್ವಾಳ: ಇಲ್ಲಿನ ಪುರಸಭೆಯನ್ನು ನಗರಸಭೆಯಾಗಿ ಮೇಲ್ದರ್ಜೆಗೇರಿಸುವ ನನ್ನ ಕನಸು ನನ್ನ ಸೋಲಿನ ಬಳಿಕ ನೆನೆಗುದಿಗೆ ಬಿದ್ದಿದೆ. ಇನ್ನೊಮ್ಮೆ ನನಗೆ ಅವಕಾಶ ನೀಡಿದರೆ ಗೆದ್ದ ತಕ್ಷಣ ಬಂಟ್ವಾಳ ಪುರಸಭೆಯನ್ನು ನಗರ ಸಭೆಯಾಗಿ ಮೇಲ್ದರ್ಜೆಗೇರಿಸುತ್ತೇನೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಭರವಸೆ ನೀಡಿದ್ದಾರೆ.
“ಬಂಟ್ವಾಳ ಪ್ರಜಾಧ್ವನಿ” ಯಾತ್ರೆಯ 8ನೇ ದಿನ ಗುಡ್ಡೆಅಂಗಡಿ ಜಂಕ್ಷನ್ನಿನಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು ನನ್ನ ಅಧಿಕಾರಾವಧಿಯಲ್ಲಿ ಮಂಜೂರಾತಿಗೊಳಿಸಿದ ಅನೇಕ ಅಭಿವೃದ್ಧಿ ಯೋಜನೆಗಳಿಗಿನ್ನೂ ಚಾಲನೆ ದೊರೆತಿಲ್ಲ. ಬಂಟ್ವಾಳ ಪುರಸಭೆಯನ್ನು ನಗರಸಭೆಯಾಗಿ ಮೇಲ್ದರ್ಜೆಗೇರಿಸುವ ನನ್ನ ಕನಸು ಮುಂದಿನ ಅವಧಿಯಲ್ಲಿ ನನಸಾಗಲಿದೆ. ಈ ಬಾರಿ ಜನ ಬಿಜೆಪಿಗರ ಮೋಸವನ್ನು ಅರ್ಥ ಮಾಡಿಕೊಂಡಿದ್ದಾರೆ. ಅಪಪ್ರಚಾರಕ್ಕೆ ಇನ್ನು ಮುಂದೆ ಜನ ಬೆಲೆ ನೀಡುವುದಿಲ್ಲ ಎನ್ನುವ ವಿಶ್ವಾಸ ನನಗಿದೆ. ಶವ ಸಂಸ್ಕಾರಕ್ಕೆ ಕೊಡುವ ಐದು ಸಾವಿರವನ್ನೂ ಕೊಡಲಾಗದ ದರಿದ್ರ ಸರಕಾರ ರಾಜ್ಯದಲ್ಲಿದೆ ಎನ್ನುವುದು ಜನತೆಗೆ ಗೊತ್ತಿದೆ ಎಂದರು.

ಕಾಂಗ್ರೆಸ್ಸಿನ ಅಭಿವೃದ್ಧಿ ಯೋಜನೆಗಳನ್ನು ಮಣ್ಣು ಪಾಲಾಗಿಸಿದ್ದೇ ಬಿಜೆಪಿಯ ಸಾಧನೆ-ಎಂ.ಜಿ.ಹೆಗ್ಗೆ

ಸಭೆಯಲ್ಲಿ ಪ್ರಧಾನ ಭಾಷಣ ಮಾಡಿದ ಲೇಖಕ ಎಂ.ಜಿ.ಹೆಗ್ಡೆ ಮಾತನಾಡಿ ಕಾಂಗ್ರೆಸ್ ಮಾಡಿದ ಅಭಿವೃದ್ದಿ ಯೋಜನೆಗಳನ್ನು ಮಣ್ಣು ಪಾಲಾಗಿಸಿದ್ದು ಮತ್ತು ಜನಸಾಮಾನ್ಯರಿಗೆ ಜೈಲು ಭಾಗ್ಯ, ಆಸ್ಪತ್ರೆ ಭಾಗ್ಯ ಹಾಗೂ ಸ್ಮಶಾನ ಭಾಗ್ಯವನ್ನು ಕೊಟ್ಟದ್ದೇ ಬಿಜೆಪಿಯ ಬಲುದೊಡ್ಡ ಸಾಧನೆ ಎಂದು ಟೀಕಿಸಿದರು.


ಭಾರತದ ಅಸ್ಮಿತೆಯೇ ಬಹುಮುಖೀ ಸಂಸ್ಕೃತಿ.ಇದನ್ನು ನೆಲೆ ನಿಲ್ಲಿಸಿದ್ದು ಕಾಂಗ್ರೆಸ್. ಮೂವತ್ತು ವರ್ಷ ಸಂಸದರಾಗಿ ಏನೂ ಮಾಡಲಾಗದವರು ಕಾಂಗ್ರೆಸ್ ಎಪ್ಪತ್ತು ವರ್ಷದಲ್ಲಿ ಏನು ಮಾಡಿದೆ ಎಂದು ಪ್ರಶ್ನಿಸುತ್ತಾರೆ ಎಂದರೆ ಇದು ವ್ಯಂಗ್ಯವಲ್ಲದೇ ಇನ್ನೇನು ಎಂದು ಪ್ರಶ್ನಿಸಿದ ಎಂ ಜಿ ಹೆಗ್ಡೆ ಹಿಂದುತ್ವಕ್ಕೆ ಬೇಸ್ ಇಲ್ಲ. ಕೇವಲ ಚುನಾವಣಾ ಗಿಮಿಕ್ ಮಾತ್ರವಾಗಿ ಹಿಂದುತ್ವ ಬಳಸಲ್ಪಡುತ್ತಿದೆ ಎಂದು ಕಿಡಿ ಕಾರಿದರು.
ಬಿಜೆಪಿಗೆ ಸೇರುವುದನ್ನು ಯಾರೂ ತಡೆಯುವುದಿಲ್ಲ. ಆದರೆ ಬಿಜೆಪಿ ಸೇರಿದರೂ ಅಭಿವೃದ್ದಿ ರಾಜಕಾರಣ ಮಾಡಿ. ಅದು ಬಿಟ್ಟು ಕೋಮುವಾದಕ್ಕೆ ಬಲಿಯಾಗದಿರಿ. ನಿಮ್ಮ ಕುಟುಂಬಕ್ಕೆ ನೀವೆ ಹೊಣೆ ಹೊರತು ಹಿಂದುತ್ವದ ಭಾಷಣ ಮಾಡುವವರಲ್ಲ ಎಂದು ಕಿವಿಮಾತು ಹೇಳಿದ ಎಂ.ಜಿ.ಹೆಗ್ಡೆ ಬಿಜೆಪಿಗರ ಹಿಂದುತ್ವ ಒರಿಜಿನಲ್ ಅಲ್ಲ ಬರೀ ಡೋಂಗಿ. ದ್ವೇಷ, ಅಸೂಯೆ, ನಿಂದನೆ, ಚಾರಿತ್ರ್ಯ ಹನನ ಮಾಡುವುದೇ ಬಿಜೆಪಿಗರ ಕಾಯಕವಾಗಿದ್ದು, ಅದೇಗೆ ಹಿಂದುತ್ವ ಆಗಲು ಸಾಧ್ಯ ಎಂದು ಪ್ರಶ್ನಿಸಿದರು.

*ಇದೇ ವೇಳೆ ಯುವ ಜೆಡಿಎಸ್ ಮುಖಂಡ ಜಿ ಎ ಅಮಾನುಲ್ಲಾ ಅವರು ಮಾಜಿ ಸಚಿವ ರಮಾನಾಥ ರೈ ಹಾಗೂ ಸ್ಥಳೀಯ ಕೌನ್ಸಿಲರ್ ಅಬೂಬಕ್ಕರ್ ಸಿದ್ದೀಕ್ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಸಭಾ ಕಾರ್ಯಕ್ರಮಕ್ಕೂ ಮುಂಚಿತವಾಗಿ ಪಾಣೆಮಂಗಳೂರು ಪೇಟೆಯಿಂದ ಬೈಕ್ ರ್ಯಾಲಿ ಆಯೋಜಿಸಲಾಗಿತ್ತು. ಗುಡ್ಡೆಅಂಗಡಿಯಲ್ಲಿ ಜೆಸಿಬಿ ಬಳಸಿ ರಮಾನಾಥ ರೈ ಅವರಿಗೆ ಪುಷ್ಪಾರ್ಚನೆ ಮಾಡಿ ಅದ್ದೂರಿ ಸ್ವಾಗತ ನೀಡಲಾಯಿತು.*

ಈ ಸಂದರ್ಭ ಯಾತ್ರಾ ಸಂಚಾಲಕ ಪಿಯೂಸ್ ಎಲ್ ರೋಡ್ರಿಗಸ್, ಕೆಪಿಸಿಸಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಜಿ ಪಂ ಮಾಜಿ ಸದಸ್ಯ ಬಿ ಪದ್ಮಶೇಖರ ಜೈನ್, ಬ್ಲಾಕ್ ಅಧ್ಯಕ್ಷರುಗಳಾದ ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ಜಿಲ್ಲಾ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ಘಟಕಾಧ್ಯಕ್ಷ ಬಿ ಎಂ ಅಬ್ಬಾಸ್ ಅಲಿ, ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕಾಧ್ಯಕ್ಷ ಕೆ ಕೆ ಶಾಹುಲ್ ಹಮೀದ್, ಸಂಘಟನಾ ಕಾರ್ಯದರ್ಶಿ ಶರೀಫ್ ಭೂಯಾ, ಬಂಟ್ವಾಳ ಅಕ್ರಮ-ಸಕ್ರಮ ಸಮಿತಿ ಮಾಜಿ ಅಧ್ಯಕ್ಷ ಕೆ ಮಾಯಿಲಪ್ಪ ಸಾಲ್ಯಾನ್, ಬಂಟ್ವಾಳ ಪುರಸಭಾಧ್ಯಕ್ಷ ಮುಹಮ್ಮದ್ ಶರೀಫ್ ಶಾಂತಿಅಂಗಡಿ, ಉಪಾಧ್ಯಕ್ಷೆ ಜೆಸಿಂತಾ ಡಿ’ಸೋಜ, ಸದಸ್ಯರಾದ ಲುಕ್ಮಾನ್ ಬಿ ಸಿ ರೋಡು, ಜನಾರ್ದನ ಚೆಂಡ್ತಿಮಾರ್, ಬಿ ವಾಸು ಪೂಜಾರಿ, ಲೋಲಾಕ್ಷ ಶೆಟ್ಟಿ, ಮುಹಮ್ಮದ್ ನಂದರಬೆಟ್ಟು, ಹಸೈನಾರ್ ತಾಳಿಪಡ್ಪು, ಬುಡಾ ಮಾಜಿ ಅಧ್ಯಕ್ಷ ಸದಾಶಿವ ಬಂಗೇರ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕಾಧ್ಯಕ್ಷ ಅರ್ಶದ್ ಸರವು, ಯುವ ಕಾಂಗ್ರೆಸ್ ಅಧ್ಯಕ್ಷರುಗಳಾದ ಇಬ್ರಾಹಿಂ ನವಾಝ್ ಬಡಕಬೈಲು, ಸುರೇಶ್ ಪೂಜಾರಿ ಜೋರಾ, ಎಪಿಎಂಸಿ ಮಾಜಿ ಅಧ್ಯಕ್ಷ ಕೆ ಪದ್ಮನಾಭ ರೈ, ತಾ ಪಂ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಸಂಪತ್ ಕುಮಾರ್ ಶೆಟ್ಟಿ, ಮುಡಿಪು ಬ್ಲಾಕ್ ಕಾಂಗ್ರೆಸ್ ವಕ್ತಾರ ಅಬ್ದುಲ್ ರಝಾಕ್ ಕುಕ್ಕಾಜೆ, ತಾ ಪಂ ಮಾಜಿ ಉಪಾಧ್ಯಕ್ಷ ಹಾಜಿ ಉಸ್ಮಾನ್ ಕರೋಪಾಡಿ, ಮಾಜಿ ಸದಸ್ಯ ಸಂಜೀವ ಪೂಜಾರಿ, ಸಜಿಪಮೂಡ ಗ್ರಾ ಪಂ ಮಾಜಿ ಅಧ್ಯಕ್ಷ ದೇವಿಪ್ರಸಾದ್ ಪೂಂಜಾ, ಪ್ರಮುಖರಾದ ಶಶಿಧರ್ ಹೆಗ್ಡೆ, ಟಿ ಎಂ ಶಹೀದ್ ಸುಳ್ಯ, ಸುಹೈಲ್ ಕಂದಕ್, ಜಯಶೀಲ ಅಡ್ಯಂತಾಯ, ಪಿ.ಎ. ರಹೀಂ, ಸ್ಟೀವನ್ ಡಿಸೋಜ, ಎನ್ ಅಬ್ದುಲ್ ಕರೀಂ ಬೊಳ್ಳಾಯಿ, ಚಂದ್ರಶೇಖರ ಪೂಜಾರಿ, ಸಿದ್ದೀಕ್ ಸರವು, ಪ್ರವೀಣ್ ರೋಡ್ರಿಗಸ್ ವಗ್ಗ, ರಾಜೀವ್ ಕಕ್ಕೆಪದವು, ವೆಂಕಪ್ಪ ಪೂಜಾರಿ,ಮಧುಸೂಧನ್ ಭಟ್ ಬೊಂಡಾಲ, ಮುಸ್ತಫಾ ಎಂ ಎಚ್ ಬೋಳಂಗಡಿ, ಶರೀಫ್ ಆಲಾಡಿ, ಪ್ರವೀಣ್ ಆಳ್ವ, ಉಮೇಶ್ ನಾಯಿಲ, ಅಬ್ದುಲ್ ಖಾದರ್ ಬಂಗ್ಲೆಗುಡ್ಡೆ, ಅಬ್ದುಲ್ ಮಜೀದ್ ಬೋಗೋಡಿ, ನಹೀಂ ಎನ್ ಬಿ, ಹಿಶಾಂ, ಕಬೀರ್ ಬಂಗ್ಲೆಗುಡ್ಡೆ, ಸಜ್ಜಾದ್, ಸಾಬಿತ್ ಆಲಡ್ಕ ಮೊದಲಾದವರು ಭಾಗವಹಿಸಿದ್ದರು. 
ಬಂಟ್ವಾಳ ಪುರಸಭಾ ಸದಸ್ಯ ಅಬೂಬಕ್ಕರ್ ಸಿದ್ದೀಕ್ ಸ್ವಾಗತಿಸಿ, ರಾಜೀವ್ ಶೆಟ್ಟಿ ಎಡ್ತೂರು ಪ್ರಸ್ತಾವನೆಗೈದರು. ಪಾಣೆಮಂಗಳೂರು ವಲಯ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ಇಕ್ಬಾಲ್ ವಂದಿಸಿದರು. ಮಾಣಿ ಗ್ರಾ ಪಂ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ ಕಾರ್ಯಕ್ರಮ ನಿರೂಪಿಸಿದರು.

ವರದಿ:ಗೋಪಾಲ ಅಂಚನ್
ಸಂಪಾದಕರು:
ಯುವಧ್ವನಿ ನ್ಯೂಸ್ ಕರ್ನಾಟಕ
ಮೊ:9449104318