ಸಾಮಾಜಿಕ ಸಾಮರಸ್ಯಕ್ಕೆ ಮಾರಕವಾದ ಕೋಮುವಾದಿ ಮನೋಭಾವನೆಯನ್ನು ಬೆಂಬಲಿಸಬೇಡಿ, ಕೋಮುವಾದಿಗಳನ್ನು ಗೆಲ್ಲಿಸಬೇಡಿ-ಬಂಟ್ವಾಳ ಪ್ರಜಾಧ್ವನಿ ಯಾತ್ರೆಯಲ್ಲಿ ಭರತ್ ಮುಂಡೋಡಿ ಕರೆ

ಬಂಟ್ವಾಳ: ಸಾಮಾಜಿಕ ಸಾಮರಸ್ಯಕ್ಕೆ ಮಾರಕವಾದ ಕೋಮುವಾದಿ ಮನೋಭಾವನೆಯನ್ನು ಯಾವತ್ತೂ ಬೆಂಬಲಿಸದಿರಿ, ಕೋಮುವಾದಿಗಳನ್ನು ಗೆಲ್ಲಿಸದಿರಿ ಎಂದು ದ.ಕ.ಜಿಲ್ಲಾ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ ಕರೆ ನೀಡಿದ್ದಾರೆ.

ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನಡೆಯುವ ಪ್ರಜಾಧ್ವನಿ ಯಾತ್ರೆಯ ಅಂಗವಾಗಿ ಕನ್ಯಾನದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಪ್ರಧಾನ ಭಾಷಣ ಮಾಡಿದ ಅವರು 2018ರ ಚುನಾವಣಾ ಫಲಿತಾಂಶ ಯಾವುದೇ ಕಾರಣಕ್ಕೂ ಮರುಕಳಿಸಬಾರದು. ದಕ್ಷ, ಪ್ರಾಮಾಣಿಕ ಹಾಗೂ ಶ್ರೇಷ್ಠ ಚಿಂತನೆಯ ರಾಜಕಾರಣಿಯಾಗಿರುವ ರಮಾನಾಥ ರೈ ಅವರನ್ನು ಯಾವುದೇ ಕಾರಣಕ್ಕೂ ಕ್ಷೇತ್ರ ಮತ್ತು ರಾಜ್ಯದ ಜನತೆ ಕಳೆದುಕೊಳ್ಳುವಂತಹ ಪರಿಸ್ಥಿತಿ ನಿರ್ಮಾಣವಾಗಬಾರದು ಎಂದರು.

ರಮಾನಾಥ ರೈಗಳ ಗೆಲುವು ಕೇವಲ ಬಂಟ್ವಾಳದ ಜನರ ಗೆಲುವಲ್ಲ. ಅದು ದಕ್ಷಿಣ ಕನ್ನಡ ಜಿಲ್ಲೆಯ ಜನರ ಗೆಲುವಾಗಲಿದೆ. 

ರಮಾನಾಥ ರೈ ಅವರಿಗೆ ಬಂಟ್ವಾಳದ ಜನತೆಯ ಮೇಲೆ ಋಣ ಇದೆ ಎಂದು ಇಷ್ಟೆಲ್ಲ ಸಾವಿರ ಕೋಟಿ ರೂಪಾಯಿಗಳ ಅನುದಾನ ತಂದು ಅಭಿವೃದ್ದಿ ಮಾಡಿದ್ದಾರೆ. ಆದರೆ ರೈ ಅವರು ಕೇವಲ ತನ್ನ ಕ್ಷೇತ್ರದ ಜನರ ಹಿತ ಮಾತ್ರ ಬಯಸಿಲ್ಲ. ಜೊತೆಗೆ ಇತರ ಕ್ಷೇತ್ರಗಳ ಜನರ ಹಿತವನ್ನೂ ಬಯಸಿದ್ದಾರೆ ಎಂದು ಭರತ್ ಮುಂಡೋಡಿ ಹೇಳಿದರು.

 ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷ ರಾಜ್ಯದ ಜನತೆಗೆ ನೀಡಿರುವ ಗ್ಯಾರಂಟಿ ಭರವಸೆಗಳನ್ನು ಈಡೇರಿಸುವುದು ಶತಸ್ಸಿದ್ದ. ಕಾಂಗ್ರೆಸ್ ಯಾವತ್ತೂ ನುಡಿದಂತೆ ನಡೆದ ಇತಿಹಾಸವಿರುವ ಪಕ್ಷ. ದೇಶದ ಬಡ ಜನರ ಏಳಿಗೆಯನ್ನು ಬಯಸಿದ ಏಕೈಕ ಪಕ್ಷ ಇದ್ದರೆ ಅದು ಕಾಂಗ್ರೆಸ್ ಮಾತ್ರ. ಕಾಂಗ್ರೆಸ್ ನಾಯಕರ ಇತಿಹಾಸವೂ ಜನತೆಗಾಗಿ ತ್ಯಾಗ-ಬಲಿದಾನ ಮಾಡಿರುವ ಇತಿಹಾಸವಾಗಿದೆ. ಈ ನಿಟ್ಟಿನಲ್ಲಿ ಜನತೆ ಕಾಂಗ್ರೆಸ್ ಪಕ್ಷದ ಬಗ್ಗೆ ಕಿಂಚಿತ್ತೂ ಸಂಶಯ ಪಡದೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಅಭ್ಯರ್ಥಿಗಳನ್ನು ಚುನಾಯಿಸಿ ತಮ್ಮ ಗ್ಯಾರಂಟಿಗಳನ್ನು ಪಡೆದುಕೊಳ್ಳಬೇಕಾಗಿದೆ ಎಂದು  ಭರತ್ ಮುಂಡೋಡಿ ಹೇಳಿದರು.

ಮಾಜಿ ಸಚಿವ ಬಿ ರಮಾನಾಥ ರೈ ಮಾತನಾಡಿ ಬಂಟ್ವಾಳದ ಜನತೆಯ ಋಣ ತೀರಿಸಲು ಜನ್ಮಜನ್ಮಾಂತರಲ್ಲೂ ಸಾಧ್ಯವಿಲ್ಲ. ಆದರೂ ಕೊನೆಯ ಅವಕಾಶದಲ್ಲಿ ಜನ ಚುನಾಯಿಸಿದರೆ ಸಾಧ್ಯವಾದಷ್ಟರ ಮಟ್ಟಿಗೆ ತಮ್ಮ ಋಣಕ್ಕೆ ಪೂರಕವಾಗಿ ಕೆಲಸ ಮಾಡಲು ಬದ್ದನಾಗಿದ್ದು, ಬಳಿಕವೂ ಪಕ್ಷ ಹಾಗೂ ಕ್ಷೇತ್ರದ ಜನರ ನಡುವೆ ಸೇವಕನಾಗಿ ದುಡಿಯುವುತ್ತೇನೆ ಎಂದರು.

ಯಾತ್ರಾ ಸಂಚಾಲಕ ಪಿಯೂಸ್ ಎಲ್ ರೋಡ್ರಿಗಸ್, ಕೆಪಿಸಿಸಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಜಿ ಪಂ ಮಾಜಿ ಸದಸ್ಯ ಬಿ ಪದ್ಮಶೇಖರ ಜೈನ್, ಬ್ಲಾಕ್ ಅಧ್ಯಕ್ಷರುಗಳಾದ ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ಜಿಲ್ಲಾ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ಘಟಕಾಧ್ಯಕ್ಷ ಬಿ ಎಂ ಅಬ್ಬಾಸ್ ಅಲಿ, ಬಂಟ್ವಾಳ ಅಕ್ರಮ-ಸಕ್ರಮ ಸಮಿತಿ ಮಾಜಿ ಅಧ್ಯಕ್ಷ ಕೆ ಮಾಯಿಲಪ್ಪ ಸಾಲ್ಯಾನ್, ಬಂಟ್ವಾಳ ಪುರಸಭಾಧ್ಯಕ್ಷ ಮುಹಮ್ಮದ್ ಶರೀಫ್ ಶಾಂತಿಅಂಗಡಿ, ಸದಸ್ಯರಾದ ಅಬೂಬಕ್ಕರ್ ಸಿದ್ದೀಕ್, ಲೋಲಾಕ್ಷ ಶೆಟ್ಟಿ, ಹಸೈನಾರ್ ತಾಳಿಪಡ್ಪು, ಬುಡಾ ಮಾಜಿ ಅಧ್ಯಕ್ಷ ಸದಾಶಿವ ಬಂಗೇರ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕಾಧ್ಯಕ್ಷ ಅರ್ಶದ್ ಸರವು, ಪಾಣೆಮಂಗಳೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹಿಂ ನವಾಝ್ ಬಡಕಬೈಲು, ತಾ ಪಂ ಮಾಜಿ ಉಪಾಧ್ಯಕ್ಷ ಉಸ್ಮಾನ್ ಕರೋಪಾಡಿ, ಪ್ರಮುಖರಾದ ಬಾಲಕೃಷ್ಣ ಆಳ್ವ ಕೊಡಾಜೆ, ಪಿ ಎ. ರಹೀಂ ಬಿ ಸಿ ರೋಡು, ಸಿದ್ದೀಕ್ ಸರವು, ಅಮಾನುಲ್ಲಾ ಗುಡ್ಡೆಅಂಗಡಿ, ಪ್ರವೀಣ್ ರೋಡ್ರಿಗಸ್ ವಗ್ಗ, ಅನ್ವರ್ ಕರೋಪಾಡಿ, ಡೆಂಝಿಲ್ ನೊರೊನ್ಹಾ, ಸಂಜಿತ್ ಪೂಜಾರಿ, ತಿಲಕ್ ಮಂಚಿ, ಮೊದಲಾದವರು ಉಪಸ್ಥಿತರಿದ್ದರು.

ವರದಿ:ಗೋಪಾಲ ಅಂಚನ್
ಸಂಪಾದಕರು:
ಯುವಧ್ವನಿ ನ್ಯೂಸ್ ಕರ್ನಾಟಕ
ಮೊ:9449104318