ಎಪ್ರಿಲ್ 16ರಂದು ವಾಮದಪದವು ವಲಯ ಮಟ್ಟದ ಬಂಟರ ಕ್ರೀಡಾಕೂಟ

ಬಂಟ್ವಾಳ: ಬಂಟರ ಸಂಘ ವಾಮದಪದವು ವಲಯದ ಆಶ್ರಯದಲ್ಲಿ ವಾಮದಪದವು ವಲಯ ಮಟ್ಟದ ಬಂಟರ ಕ್ರೀಡಾಕೂಟವು ಎಪ್ರಿಲ್ 16ರಂದು ಆಲದಪದವಿನ ಸಂಘದ ನಿವೇಶನದಲ್ಲಿ ನಡೆಯಲಿದೆ. ಕ್ರೀಡಾಕೂಟದಲ್ಲಿ ಮಕ್ಕಳಿಗೆ, ಮಹಿಳೆಯರಿಗೆ, ಪುರುಷರಿಗೆ ಹಾಗೂ 50 ವರ್ಷ ಮೇಲ್ಪಟ್ಟವರಿಗೆ ವಿವಿಧ ಆಟೋಟ ಸ್ಪರ್ಧೆಗಳು ನಡೆಯಲಿದೆ.
ಬೆಳಿಗ್ಗೆ ಸಭಾ ಕಾರ್ಯಕ್ರಮ ನಡೆಯಲಿದ್ದು ಶ್ರೀ ಬಾರ್ಕೂರು ಮಹಾಸಂಸ್ಥಾನದ ಶ್ರೀ ಡಾ. ವಿದ್ಯಾವಾಚಸ್ಪತಿ ವಿಶ್ವಸಂತೋಷ ಭಾರತಿ ಶ್ರೀಪಾದರು ಆಶೀರ್ವಚನ ನೀಡುವರು. ಮೂಡಬಿದ್ರಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಕ್ರೀಡಾಕೂಟ ಉದ್ಘಾಟಿಸುವರು. ಗೋವಾ ಬಂಟರ ಸಂಘದ ಮಾಜಿ ಅಧ್ಯಕ್ಷ ಮುರಳಿ ಮೋಹನ್ ಶೆಟ್ಟಿ ದೀಪ ಪ್ರಜ್ವಲಿಸುವರು. ವಾಮದಪದವು ವಲಯ ಬಂಟರ ಸಂಘದ ಅಧ್ಯಕ್ಷ ವಸಂತ ಶೆಟ್ಟಿ ಕೇದಗೆ ಅಧ್ಯಕ್ಷತೆ ವಹಿಸುವರು.
ಬಂಟ್ವಾಳ ಬಂಟರ ಸಂಘದ ಅಧ್ಯಕ್ಷ ಚಂದ್ರಹಾಸ ಡಿ.ಶೆಟ್ಟಿ, ನ್ಯಾಯವಾದಿ ಆಶ್ವನಿ ಕುಮಾರ್ ರೈ, ಉದ್ಯಮಿ ಹರೀಶ್ ಶೆಟ್ಟಿ ಬಂಟ್ವಾಳ, ಬಂಟ್ವಾಳ ಬಂಟರ ಸಂಘದ ಕಾರ್ಯದರ್ಶಿ ಜಗನ್ನಾಥ ಚೌಟ ಬದಿಗುಡ್ಡೆ, ಮೂಡಬಿದ್ರಿ ಮಹಿಳಾ ಘಟಕದ ಅಧ್ಯಕ್ಷೆ ಶೋಭಾ ಎಸ್.ಹೆಗ್ಡೆ, ಬಂಟ್ವಾಳ ಬಂಟರ ಸಂಘ ಯುವ ವಿಭಾಗದ ಅಧ್ಯಕ್ಷ ನಿಶಾನ್ ಆಳ್ವ ಮೊದಲಾದವರು ಅತಿಥಿಗಳಾಗಿ ಭಾಗವಹಿಸುವರು ಎಂದು ವಾಮದಪದವು ವಲಯ ಬಂಟರ ಸಂಘದ ಪ್ರಕಟಣೆ ತಿಳಿಸಿದೆ.

ವರದಿ: ಗೋಪಾಲ ಅಂಚನ್
ಸಂಪಾದಕರು:
ಯುವಧ್ವನಿ ನ್ಯೂಸ್ ಕರ್ನಾಟಕ
ಮೊ:9449104318