ಶ್ರೀ ಕ್ಷೇತ್ರ ಪೊಳಲಿಯಿಂದ ಪಾದಯಾತ್ರೆಯಲ್ಲಿ ಬಂದು ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ನಾಮಪತ್ರ ಸಲ್ಲಿಕೆ

ಬಂಟ್ವಾಳ: ಶ್ರೀ ಕ್ಷೇತ್ರ ಪೊಳಲಿಯಿಂದ ಪಾದಯಾತ್ರೆಯಲ್ಲಿ ಬಂದು ಬಂಟ್ವಾಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಮಾಜಿ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಶನಿವಾರ ನಾಮಪತ್ರ ಸಲ್ಲಿಸಿದರು.
ಬೆಳಿಗ್ಗೆ ಪೊಳಲಿ ಶ್ರೀ ರಾಜರಾಜೇಶ್ವರೀ ದೇವಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಅವರು ಬಳಿಕ ಅಪಾರ ಸಂಖ್ಯೆಯ ಬೆಂಬಲಿಗರೊಂದಿಗೆ ಪಾದಯಾತ್ರೆಯ ಮೂಲಕ ಬಿ.ಸಿ.ರೋಡಿನತ್ತ ಹೆಜ್ಜೆ ಹಾಕಿದರು. ಕಾರ್ಯಕರ್ತರು, ಅಭಿಮಾನಿಗಳು ಜಯಘೋಷ ಹಾಕುತ್ತಾ ಪಾದಯಾತ್ರೆಯಲ್ಲಿ ಸಾಗಿ ಬಂದರು.


ಬಳಿಕ ಮಧ್ಯಾಹ್ನದ ವೇಳೆ ಬಿ.ಸಿ.ರೋಡಿನ ತಾಲೂಕು ಆಡಳಿತ ಸೌಧದಲ್ಲಿರುವ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾಧಿಕಾರಿ ಅಭಿದ್ ಗಡ್ಯಾಲ್ ಅವರಿಗೆ ನಾಮಪತ್ರ ಸಲ್ಲಿಸಿದರು.
ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಮಾಜಿ ಶಾಸಕ ಎ. ರುಕ್ಮಯ ಪೂಜಾರಿ, ಬಿಜೆಪಿ ಮಂಡಲ ಅಧ್ಯಕ್ಷ ದೇವಪ್ಪ ಪೂಜಾರಿ, ಬೂಡ ಅಧ್ಯಕ್ಷ ದೇವದಾಸ್ ಶೆಟ್ಟಿ ಶೆಟ್ಟಿ ಉಪಸ್ಥಿತಿಯಲ್ಲಿ ನಾಮಪತ್ರ ಸಲ್ಲಿಸಲಾಯಿತು.
ಈ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ರಾಜೇಶ್ ನಾಯ್ಕ್ ಈ ಬಾರಿಯ ಚುನಾವಣೆಯಲ್ಲಿ ಅತ್ಯಧಿಕ ಮತಗಳಿಂದ ಜನತೆ ನನ್ನನ್ನು ಗೆಲ್ಲಿಸುತ್ತಾರೆ ಎಂಬ ವಿಶ್ವಾಸವಿದೆ. ರಾಜ್ಯ ಹಾಗೂ ಕೇಂದ್ರ ಸರ್ಕಾರದ ಜನಪರ ಯೋಜನೆಗಳು ಮತ್ತು ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಆದ ಅಭಿವೃದ್ಧಿ ಕಾರ್ಯಗಳು ತನ್ನ ಗೆಲುವಿಗೆ ಪೂರಕವಾಗಲಿದೆ ಎಂದರು.


ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ ಶಾಂತಿಯುತವಾದ ಮತ್ತು ಸಮೃದ್ಧವಾದ ಬಂಟ್ವಾಳಕ್ಕಾಗಿ ಜನತೆ ರಾಜೇಶ್ ನಾಯ್ಕ್ ಅವರನ್ನು ಬೆಂಬಲಿಸಲಿದ್ದಾರೆ. ಇಂದು ಸೇರಿದ ಅಪಾರ ಜನಸ್ತೋಮವೇ ಇದಕ್ಕೆ ಸಾಕ್ಷಿಯಾಗಿದೆ ಎಂದರು.


ರಾಜ್ಯ ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಮಾಜಿ ಶಾಸಕ ಕೆ.ಪದ್ಮನಾಭ ಕೊಟ್ಟಾರಿ, ಪ್ರಮುಖರಾದ ಸಂತೋಷ್ ಶೆಟ್ಟಿ ದಳಂದಿಲ, ಕ್ಯಾಪ್ಟನ್ ಬ್ರಿಜೇಶ್ ಚೌಟ, ಸುಲೋಚನ ಜಿ.ಕೆ.ಭಟ್, ಕಸ್ತೂರಿ ಪಂಜ, ಸುಚರಿತ ಶೆಟ್ಟಿ, ಕೊರಗಪ್ಪ ನಾಯ್ಕ್, ಶರಣ್ ಪಂಪ್ ವೆಲ್ , ರಾಮ್ ದಾಸ್ ಬಂಟ್ವಾಳ , ಡೊಂಬಯ್ಯ ಅರಳ, ರವೀಶ್ ಶೆಟ್ಟಿ ಕರ್ಕಳ, ಗೋವಿಂದ ಪ್ರಭು, ದಿನೇಶ್ ಭಂಡಾರಿ, ಉದಯ ಕುಮಾರ್ ರಾವ್, ಸುದರ್ಶನ ಬಜ, ಪ್ರಭಾಕರ ಪ್ರಭು, ವಿವೇಕ್ ಶೆಟ್ಟಿ ನಗ್ರಿಗುತ್ತು, ಶ್ರೀಕಾಂತ್ ಶೆಟ್ಟಿ, ನಳಿನಿ ಶೆಟ್ಟಿ, ಮಾಧವ ಮಾವೆ, ಪುಷ್ಪರಾಜ್ ಚೌಟ, ಕಿಶೋರ್ ಪಲ್ಲಿಪಾಡಿ, ಶ್ರೀಧರ್ ಶೆಟ್ಟಿ ಪುಳಿಂಚ, ಕಮಲಾಕ್ಷಿ ಕೆ.ಪೂಜಾರಿ, ರವೀಂದ್ರ ಕಂಬಳಿ, ವಿಲಾಸ್ ನಾಯಕ್, ಪ್ರಕಾಶ್ ಅಂಚನ್, ಚೆನ್ನಪ್ಪ ಕೋಟ್ಯಾನ್, ಕೃಷ್ಣಪ್ಪ ಪೂಜಾರಿ, ರಮನಾಥ ರಾಯಿ, ದಿನೇಶ್ ಅಮ್ಟೂರು, ಮೋನಪ್ಪ ದೇವಶ್ಯ, ವಜ್ರನಾಥ ಕಲ್ಲಡ್ಕ, ಪ್ರದೀಪ್ ಅಜ್ಜಿಬೆಟ್ಡು, ದಿನೇಶ್ ದಂಬೆದಾರ್, ಸತೀಶ್ ಪೂಜಾರಿ ಆಳಕೆ, ಯಶೋಧರ ಕರ್ಬೆಟ್ಟು, ಸಂದೇಶ್ ಶೆಟ್ಟಿ, ಸಂದೀಪ್ ಶೆಟ್ಟಿ, ಸುಪ್ರೀತ್ ಆಳ್ಚ, ಗಣೇಶ್ ರೈ ಮಾಣಿ, ಸುರೇಶ್ ಕೋಟ್ಯಾನ್, ಭಾರತಿ ಚೌಟ, ಸೀಮಾಮಾಧವ, ಹರ್ಷಿಣಿ ಪುಷ್ಪಾನಂದ, ಶರ್ಮಿತ್ ಜೈನ್, ವೆಂಕಟೇಶ್ ನಾವಡ, ಯಶವಂತ ಪೊಳಲಿ ಮತ್ತಿತರರು ಉಪಸ್ಥಿತರಿದ್ದರು.

ವರದಿ:ಗೋಪಾಲ ಅಂಚನ್
ಸಂಪಾದಕರು:
ಯುವಧ್ವನಿ ನ್ಯೂಸ್ ಕರ್ನಾಟಕ
ಮೊ:9449104318