ವಿವಿಧ ಧರ್ಮಗಳ ಆರಾಧನಾ ಕೇಂದ್ರಗಳಿಗೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಬಿ.ರಮಾನಾಥ ರೈ

ಮಂಗಳೂರು : ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಚಿವ ಬಿ. ರಮಾನಾಥ ರೈ ವಿವಿಧ ಧರ್ಮಗಳ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಕೊಲ್ಲೂರು ಮುಕಾಂಬಿಕೆ ದೇವಸ್ಥಾನ, ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನ, ಬಂದರು ಕೇಂದ್ರ ಜುಮ್ಮಾ ಮಸೀದಿ ದರ್ಗಾಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ರೈ ಮಂಗಳೂರು ಕ್ಯಾಥೋಲಿಕ್ ಧರ್ಮಪ್ರಾಂತದ ಬಿಷಪ್ ಪೀಟರ್ ಪೌಲ್ ಸಲ್ದಾನ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.


ಮೋಹನ್ ಚಂದ್ರ ನಂಬಿಯಾರ್, ಧರ್ಮದರ್ಶಿ ಸಾಯಿರಾಮ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಧೀರಜ್ ಪಾಲ್, ಕು. ಅಪ್ಪಿ, ವಿಶ್ವಾಸ್ ಕುಮಾರ್ ದಾಸ್, ಶಶಿಧರ್ ಹೆಗ್ಡೆ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಲೆಟ್ ಪಿಂಟೋ, ಮಂಗಳೂರು ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕ ನವೀನ್ ಆರ್. ಡಿಸೋಜ, ಕಾರ್ಪೊರೇಟರ್ ಗಳಾದ ವಿನಯ್ ರಾಜ್, ಕೆ. ಪಿ. ಸಿ. ಸಿ. ಸದಸ್ಯ ಪಿಯೂಸ್ ಎಲ್. ರೊಡ್ರಿಗಸ್, ಮಾಜಿ ಕಾರ್ಪೊರೇಟರ್ ಸಬೀತಾ ಮಿಸ್ಕಿತ್, ಮಾಜಿ ಮೇಯರ್ ಅಶ್ರಫ್, ಕಾರ್ಪೊರೇಟರ್ ಸಂಶುದ್ದಿನ್ ರವೂಫ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶಬ್ಬೀರ್ ಸಿದ್ದಕಟ್ಟೆ, ಅಲ್ವಿನ್ ಪ್ರಕಾಶ್, ಸಿ. ಎಂ. ಮುಸ್ತಫಾ, ಅಸ್ಲಾಂ ಮತ್ತಿತರರು ಉಪಸ್ಥಿತರಿದ್ದರು.

ವರದಿ:ಗೋಪಾಲ ಅಂಚನ್
ಸಂಪಾದಕರು:
ಯುವಧ್ವನಿ ನ್ಯೂಸ್ ಕರ್ನಾಟಕ
ಮೊ:9449104318