ಸಿರಿಗುಂಡದಪಾಡಿ ಬ್ರಹ್ಮಲಿಂಗೇಶ್ವರ ದೇವಸ್ಥಾನ-ಕುಮಾರ, ಸಿರಿ, ಅಬ್ಬಗ ದಾರಗ ಆದಿ ಆಲಡೆಯಲ್ಲಿ ಎಪ್ರಿಲ್ 27ರಿಂದ 29ರವರೆಗೆ ಬ್ರಹ್ಮಕಲಶೋತ್ಸವ ಹಾಗೂ ಸಿರಿಜಾತ್ರೆ-ಆಮಂತ್ರಣ ಪತ್ರಿಕೆ ಬಿಡುಗಡೆ

ಬಂಟ್ವಾಳ: ತಾಲೂಕಿನ ಮೂಡುಪಡುಕೋಡಿ ಗ್ರಾಮದ ಸಿರಿಗುಂಡದಪಾಡಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನ-ಕುಮಾರ, ಸಿರಿ, ಅಬ್ಬಗ ದಾರಗ ಆದಿ ಆಲಡೆಯಲ್ಲಿ ಎಪ್ರಿಲ್ 27ರಿಂದ 29ರವರೆಗೆ ಬ್ರಹ್ಮಕಲಶೋತ್ಸವ ಹಾಗೂ ಸಿರಿಜಾತ್ರೆಯು ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆ ಗುರುವಾರ ರಾತ್ರಿ ಬಿಡುಗಡೆಗೊಂಡಿತು‌.


ಉದ್ಯಮಿ, ಬ್ರಹ್ಮಕಲಶೋತ್ಸವದ ಆರ್ಥಿಕ ಸಮಿತಿ ಸಂಚಾಲಕ ಟಿ.ಹರೀಂದ್ರ ಪೈ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು.
ದೇವಸ್ಥಾನದ ಪುನರ್ ನಿರ್ಮಾಣದ ಕಾರ್ಯ ಮತ್ತು ಧಾರ್ಮಿಕವಾದ ಸತ್ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ನಾವೆಲ್ಲರೂ ದೇವರ ಅನುಗ್ರಹಕ್ಕೆ ಪಾತ್ರರಾಗಬೇಕಾಗಿದೆ. ಬ್ರಹ್ಮಕಲಶೋತ್ಸವದ ಯಶಸ್ವಿಯಲ್ಲಿ ನಾವೆಲ್ಲರೂ ಸಕ್ರೀಯವಾಗಿ ತೊಡಗಿಸಿಕೊಳ್ಳಬೇಕಾಗಿದೆ ಎಂದು ಅವರು ಹೇಳಿದರು.


ಆಡಳಿತ ಸಮಿತಿ ಅಧ್ಯಕ್ಷ ಮೋಹನ್ ಶೆಟ್ಡಿ ನರ್ವಲ್ದಡ್ಡ, ಕಾರ್ಯಾಧ್ಯಕ್ಷ ಜಿ.ಕೆ.ಭಟ್, ಪ್ರಧಾನ ಅರ್ಚಕ ಗೋಪಾಲಕೃಷ್ಣ ಭಟ್ ಸನಂಗುಳಿ, ಡಾ. ಶಿವಪ್ರಸಾದ್ ಭಟ್, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಡಾ. ರಾಮಕೃಷ್ಣ ಎಸ್, ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ ಕೊರಗ ಶೆಟ್ಟಿ ನರ್ವಲ್ದಡ್ಡ, ಅಧ್ಯಕ್ಷ ಬೂಬ ಸಪಲ್ಯ ಮುಂಡಬೈಲು, ಸಂಚಾಲಕ ಗೋಪಾಲ ಅಂಚನ್, ಪದಾಧಿಕಾರಿಗಳಾದ ಗಣೇಶ್ ಶೆಟ್ಟಿ ಸೇವಾ, ದಯಾನಂದ ಎಸ್. ಎರ್ಮೆನಾಡು, ಶೀನ ಬಂಗೇರ ಮುಂಡಬೈಲು, ಮಂಜುನಾಥ ಪೂಜಾರಿ ಮುಂಡಬೈಲು, ಲೋಕನಾಥ ಶೆಟ್ಟಿ ನರ್ವಲ್ದಡ್ಡ, ಹರಿಣಾಕ್ಷಿ ಶೆಟ್ಟಿ, ನಳಿನಿ ಪುರಂದರ ಪೂಜಾರಿ, ವಿನುತ ರವಿ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

ವರದಿ:ಗೋಪಾಲ ಅಂಚನ್
ಸಂಪಾದಕರು:
ಯುವಧ್ವನಿ ನ್ಯೂಸ್ ಕರ್ನಾಟಕ
ಮೊ:9449104318